ಬ್ರೇಕಿಂಗ್ ನ್ಯೂಸ್
03-11-20 03:47 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 03: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಪ್ರತೀಕ್ ಮತ್ತು ಮಂಗಳೂರಿನ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆ ಪ್ರಕರಣದಲ್ಲಿ ಇವರು, ಪ್ರಮುಖ ಆರೋಪಿಗಳು ಬಚಾವಾಗಲು ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ಕುಲಾಲ್ ಮತ್ತು ಗಿರೀಶನಿಗೆ ಕೊಲೆಗೈದ ಬಳಿಕ ಬೆಳ್ತಂಗಡಿಯಲ್ಲಿ ಉಳಿದುಕೊಳ್ಳಲು ಮತ್ತು ವಾಹನದ ವ್ಯವಸ್ಥೆಯನ್ನು ಪ್ರತೀಕ್ ಮಾಡಿದ್ದು ಅದಕ್ಕಾಗಿ 2.5 ಲಕ್ಷ ರೂ. ಹಣ ಪಡೆದಿದ್ದ. ಇನ್ನು ಮಂಗಳೂರಿನ ಕೊಂಚಾಡಿ ನಿವಾಸಿ ಜಯೇಶ್, ಪ್ರಮುಖ ಆರೋಪಿ ಆಕಾಶಭವನ್ ಶರಣ್ ಅಣತಿಯಂತೆ ಸುಪಾರಿ ಹಣವನ್ನು ಆರೋಪಿ ಪ್ರದೀಪನಿಂದ ಪಡೆದು ಕೊಲೆಗೆ ವ್ಯವಸ್ಥೆ ಮಾಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಪ್ರತೀಕ್ ಕೋಟ್ಯಾನ್ ಈ ಹಿಂದೆ ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡಿದ್ದು ಬಳಿಕ ಬೆಳ್ತಂಗಡಿಯಲ್ಲಿ ಮಾಧ್ಯಮದ ವ್ಯಕ್ತಿಯೆಂದು ಹೇಳಿ ಓಡಾಡಿಕೊಂಡಿದ್ದ. ಇತ್ತೀಚೆಗೆ ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲೂ ಬಂಧಿಸಲ್ಪಟ್ಟಿದ್ದ. ಜಯೇಶ್, ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸಂಘಟನೆಯಲ್ಲಿ ಗುರುತಿಸಿದ್ದು ಮಂಗಳೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಕೆಲವು ಕಾರ್ಯಕ್ರಮಗಳಲ್ಲಿ ಮತ್ತು ಪೋಸ್ಟರ್ ಗಳಲ್ಲಿ ಆತನ ಫೋಟೊ ಕಾಣಿಸಿಕೊಂಡಿತ್ತು.




ಈಗಾಗ್ಲೇ ಬಂಟ್ವಾಳ ಪೊಲೀಸರು ಪ್ರಕರಣ ಸಂಬಂಧಿಸಿ 9 ಮಂದಿಯನ್ನು ಬಂಧಿಸಿತ್ತು. ಇವರಿಬ್ಬರನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಈಗ ಅಧಿಕೃತವಾಗಿ ಬಂಧಿಸಿದ್ದು ಒಟ್ಟು ಬಂಧಿತರ ಸಂಖ್ಯೆ 11 ಕ್ಕೇರಿದೆ.
In connection to the Murder of Surendra Bantwal, the police have arrested two more persons. The arrested are identified as Pratheek Kotyan from Belthanagady and Jayesh Sachu from Mangalore. Total number of arrest has raised to 11.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm