ಬ್ರೇಕಿಂಗ್ ನ್ಯೂಸ್
12-07-23 01:14 pm HK News Desk ಕ್ರೈಂ
ಡಾರ್ಜಿಲಿಂಗ್, ಜುಲೈ 12: ಭಾರತೀಯ ಸೇನೆಯ ಕರ್ನಲ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಕಲಿ ಸೇನಾ ನೇಮಕಾತಿ ದಂಧೆ ನಡೆಸುತ್ತಿದ್ದ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.
ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಮತ್ತು ಸಿಲಿಗುರಿ ಪೊಲೀಸ್ ಗುಪ್ತಚರ ವಿಭಾಗವು ಈ ಬಗ್ಗೆ ಕಾರ್ಯಾಚರಣೆ ನಡೆಸಿದ್ದು ನಕಲಿ ಸೇನಾಧಿಕಾರಿ ದಾಲ್ ಚಂದ್ ಶರ್ಮಾ ಎಂಬಾತನನ್ನು ಬಂಧಿಸಿದೆ.
ಸೇನಾಧಿಕಾರಿಯೆಂದು ನಟಿಸುತ್ತಿದ್ದ ವ್ಯಕ್ತಿ ಸೇನೆಗೆ ಸೇರಲು ಬಯಸುವ ಯುವಕರನ್ನು ಸಂಪರ್ಕಿಸಿ, ಕೆಲಸ ತೆಗೆಸಿಕೊಡುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪ ಕೇಳಿ ಬಂದಿತ್ತು. ದಂಧೆಯ ಬಗ್ಗೆ ಮಾಹಿತಿ ಪಡೆದು ಭಾರತೀಯ ಸೇನೆ, ಸಿಲಿಗುರಿ ಪೊಲೀಸ್ ಕಮಿಷನರೇಟ್ ಅನ್ನು ಸಂಪರ್ಕಿಸಿ ಕಾರ್ಯಾಚರಣೆ ನಡೆಸಿತ್ತು. ಬಳಿಕ ಭಕ್ತಿನಗರ ಠಾಣೆಯ ಪೊಲೀಸರು ಭಾರತೀಯ ಸೇನೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಈತ ಸಿಕ್ಕಿಂ ರಾಜ್ಯದ ಗ್ಯಾಂಗ್ಟಾಕ್ ನಿವಾಸಿಯಾಗಿದ್ದಾನೆ.

ಆರೋಪಿ ತನ್ನನ್ನು ಭಾರತೀಯ ಸೇನೆಯ ಆರ್ಟಿಲರಿ ವಿಭಾಗದ ಲೆಫ್ಟಿನೆಂಟ್ ಕರ್ನಲ್ ಎಂದು ಹೇಳಿಕೊಂಡು ವಂಚಿಸುತ್ತಿದ್ದ. ಆರೋಪಿಯಿಂದ ಮೊಬೈಲ್ ಫೋನ್, ನಕಲಿ ಭಾರತೀಯ ಸೇನಾ ನೋಂದಣಿ ನಮೂನೆ ಮತ್ತು ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೇನೆಯಲ್ಲಿ ಅಗ್ನಿಶಾಮಕ ದಳದ ಕೆಲಸ ಕೊಡಿಸುವುದಾಗಿ ಹೇಳಿ ದಾಲ್ಚಂದ್ ಹಲವು ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡರಿಂದ ಎರಡುವರೆ ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿಯಾಗಲು ಸಿಲಿಗುರಿಗೆ ಬರುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿ ದಾಲ್ಚಂದ್ ಸೇನಾಧಿಕಾರಿಯ ಸಮವಸ್ತ್ರದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿ ಮಾಡಲು ಕಾಯುತ್ತಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a joint operation, the Military Intelligence Bureau (M.I.) and Bhakti Nagar police successfully apprehended an imposter posing as an army colonel. The arrest took place at a restaurant in Salugara, where the accused imposter, identified as Dalchand Verma (50) from Sikkim, was caught.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm