ಬ್ರೇಕಿಂಗ್ ನ್ಯೂಸ್
12-07-23 01:14 pm HK News Desk ಕ್ರೈಂ
ಡಾರ್ಜಿಲಿಂಗ್, ಜುಲೈ 12: ಭಾರತೀಯ ಸೇನೆಯ ಕರ್ನಲ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಕಲಿ ಸೇನಾ ನೇಮಕಾತಿ ದಂಧೆ ನಡೆಸುತ್ತಿದ್ದ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.
ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಮತ್ತು ಸಿಲಿಗುರಿ ಪೊಲೀಸ್ ಗುಪ್ತಚರ ವಿಭಾಗವು ಈ ಬಗ್ಗೆ ಕಾರ್ಯಾಚರಣೆ ನಡೆಸಿದ್ದು ನಕಲಿ ಸೇನಾಧಿಕಾರಿ ದಾಲ್ ಚಂದ್ ಶರ್ಮಾ ಎಂಬಾತನನ್ನು ಬಂಧಿಸಿದೆ.
ಸೇನಾಧಿಕಾರಿಯೆಂದು ನಟಿಸುತ್ತಿದ್ದ ವ್ಯಕ್ತಿ ಸೇನೆಗೆ ಸೇರಲು ಬಯಸುವ ಯುವಕರನ್ನು ಸಂಪರ್ಕಿಸಿ, ಕೆಲಸ ತೆಗೆಸಿಕೊಡುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪ ಕೇಳಿ ಬಂದಿತ್ತು. ದಂಧೆಯ ಬಗ್ಗೆ ಮಾಹಿತಿ ಪಡೆದು ಭಾರತೀಯ ಸೇನೆ, ಸಿಲಿಗುರಿ ಪೊಲೀಸ್ ಕಮಿಷನರೇಟ್ ಅನ್ನು ಸಂಪರ್ಕಿಸಿ ಕಾರ್ಯಾಚರಣೆ ನಡೆಸಿತ್ತು. ಬಳಿಕ ಭಕ್ತಿನಗರ ಠಾಣೆಯ ಪೊಲೀಸರು ಭಾರತೀಯ ಸೇನೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಈತ ಸಿಕ್ಕಿಂ ರಾಜ್ಯದ ಗ್ಯಾಂಗ್ಟಾಕ್ ನಿವಾಸಿಯಾಗಿದ್ದಾನೆ.

ಆರೋಪಿ ತನ್ನನ್ನು ಭಾರತೀಯ ಸೇನೆಯ ಆರ್ಟಿಲರಿ ವಿಭಾಗದ ಲೆಫ್ಟಿನೆಂಟ್ ಕರ್ನಲ್ ಎಂದು ಹೇಳಿಕೊಂಡು ವಂಚಿಸುತ್ತಿದ್ದ. ಆರೋಪಿಯಿಂದ ಮೊಬೈಲ್ ಫೋನ್, ನಕಲಿ ಭಾರತೀಯ ಸೇನಾ ನೋಂದಣಿ ನಮೂನೆ ಮತ್ತು ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೇನೆಯಲ್ಲಿ ಅಗ್ನಿಶಾಮಕ ದಳದ ಕೆಲಸ ಕೊಡಿಸುವುದಾಗಿ ಹೇಳಿ ದಾಲ್ಚಂದ್ ಹಲವು ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡರಿಂದ ಎರಡುವರೆ ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿಯಾಗಲು ಸಿಲಿಗುರಿಗೆ ಬರುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿ ದಾಲ್ಚಂದ್ ಸೇನಾಧಿಕಾರಿಯ ಸಮವಸ್ತ್ರದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿ ಮಾಡಲು ಕಾಯುತ್ತಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a joint operation, the Military Intelligence Bureau (M.I.) and Bhakti Nagar police successfully apprehended an imposter posing as an army colonel. The arrest took place at a restaurant in Salugara, where the accused imposter, identified as Dalchand Verma (50) from Sikkim, was caught.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm