ಬ್ರೇಕಿಂಗ್ ನ್ಯೂಸ್
12-07-23 01:14 pm HK News Desk ಕ್ರೈಂ
ಡಾರ್ಜಿಲಿಂಗ್, ಜುಲೈ 12: ಭಾರತೀಯ ಸೇನೆಯ ಕರ್ನಲ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಕಲಿ ಸೇನಾ ನೇಮಕಾತಿ ದಂಧೆ ನಡೆಸುತ್ತಿದ್ದ ಪ್ರಕರಣ ಪಶ್ಚಿಮ ಬಂಗಾಳದಲ್ಲಿ ಬೆಳಕಿಗೆ ಬಂದಿದೆ.
ಭಾರತೀಯ ಸೇನೆಯ ತ್ರಿಶಕ್ತಿ ಕಾರ್ಪ್ಸ್ ಮತ್ತು ಸಿಲಿಗುರಿ ಪೊಲೀಸ್ ಗುಪ್ತಚರ ವಿಭಾಗವು ಈ ಬಗ್ಗೆ ಕಾರ್ಯಾಚರಣೆ ನಡೆಸಿದ್ದು ನಕಲಿ ಸೇನಾಧಿಕಾರಿ ದಾಲ್ ಚಂದ್ ಶರ್ಮಾ ಎಂಬಾತನನ್ನು ಬಂಧಿಸಿದೆ.
ಸೇನಾಧಿಕಾರಿಯೆಂದು ನಟಿಸುತ್ತಿದ್ದ ವ್ಯಕ್ತಿ ಸೇನೆಗೆ ಸೇರಲು ಬಯಸುವ ಯುವಕರನ್ನು ಸಂಪರ್ಕಿಸಿ, ಕೆಲಸ ತೆಗೆಸಿಕೊಡುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪ ಕೇಳಿ ಬಂದಿತ್ತು. ದಂಧೆಯ ಬಗ್ಗೆ ಮಾಹಿತಿ ಪಡೆದು ಭಾರತೀಯ ಸೇನೆ, ಸಿಲಿಗುರಿ ಪೊಲೀಸ್ ಕಮಿಷನರೇಟ್ ಅನ್ನು ಸಂಪರ್ಕಿಸಿ ಕಾರ್ಯಾಚರಣೆ ನಡೆಸಿತ್ತು. ಬಳಿಕ ಭಕ್ತಿನಗರ ಠಾಣೆಯ ಪೊಲೀಸರು ಭಾರತೀಯ ಸೇನೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಈತ ಸಿಕ್ಕಿಂ ರಾಜ್ಯದ ಗ್ಯಾಂಗ್ಟಾಕ್ ನಿವಾಸಿಯಾಗಿದ್ದಾನೆ.

ಆರೋಪಿ ತನ್ನನ್ನು ಭಾರತೀಯ ಸೇನೆಯ ಆರ್ಟಿಲರಿ ವಿಭಾಗದ ಲೆಫ್ಟಿನೆಂಟ್ ಕರ್ನಲ್ ಎಂದು ಹೇಳಿಕೊಂಡು ವಂಚಿಸುತ್ತಿದ್ದ. ಆರೋಪಿಯಿಂದ ಮೊಬೈಲ್ ಫೋನ್, ನಕಲಿ ಭಾರತೀಯ ಸೇನಾ ನೋಂದಣಿ ನಮೂನೆ ಮತ್ತು ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೇನೆಯಲ್ಲಿ ಅಗ್ನಿಶಾಮಕ ದಳದ ಕೆಲಸ ಕೊಡಿಸುವುದಾಗಿ ಹೇಳಿ ದಾಲ್ಚಂದ್ ಹಲವು ಉದ್ಯೋಗಾಕಾಂಕ್ಷಿಗಳಿಂದ ತಲಾ ಎರಡರಿಂದ ಎರಡುವರೆ ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿಯಾಗಲು ಸಿಲಿಗುರಿಗೆ ಬರುತ್ತಿದ್ದಾನೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿ ದಾಲ್ಚಂದ್ ಸೇನಾಧಿಕಾರಿಯ ಸಮವಸ್ತ್ರದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಭೇಟಿ ಮಾಡಲು ಕಾಯುತ್ತಿದ್ದಾಗಲೇ ಪೊಲೀಸರು ಬಂಧಿಸಿದ್ದಾರೆ. ದಂಧೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a joint operation, the Military Intelligence Bureau (M.I.) and Bhakti Nagar police successfully apprehended an imposter posing as an army colonel. The arrest took place at a restaurant in Salugara, where the accused imposter, identified as Dalchand Verma (50) from Sikkim, was caught.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm