ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.

ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm