ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.

ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm