ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.

ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm