ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.

ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm