ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.

ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm