ಬ್ರೇಕಿಂಗ್ ನ್ಯೂಸ್
13-07-23 06:45 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 13: ಮೂರು ಪಿಕಪ್ ವಾಹನಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಉಜಿರೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಕನ್ಯಾಡಿಯಲ್ಲಿ ಪೊಲೀಸರು ಅಡ್ಡಹಾಕಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಆರು ದನಗಳು, ಎರಡು ಕಂದು ಬಣ್ಣದ ಗಂಡು ಕರುಗಳು ಪತ್ತೆಯಾಗಿದ್ದು, ತಪಾಸಣೆ ನಡೆಸಿದಾಗ ಗೋವುಗಳನ್ನು ಹಾಸನಕ್ಕೆ ಮಾರಾಟಕ್ಕಾಗಿ ಒಯ್ಯುತ್ತಿರುವುದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ.
ಗೋವುಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಮತ್ತು ನಾವೂರು ಪರಿಸರದಿಂದ ಖರೀದಿಸಿದ್ದು, ಮಾರಾಟ ಮಾಡುವ ಉದ್ದೇಶದಿಂದ ಹಾಸನಕ್ಕೆ ಒಯ್ಯುತ್ತಿರುವುದಾಗಿ ಆರೋಪಿಗಳ ಪೈಕಿ ಚೆನ್ನಕೇಶವ ತಿಳಿಸಿದ್ದಾನೆ. ಆದರೆ, ಸಾಗಾಟ ಪರವಾನಗಿ ಇಲ್ಲದೇ ಇದ್ದುದರಿಂದ ವಾಹನಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನಗಳು ನಾವೂರು ಗ್ರಾಮದ ರಮಾನಂದ ಸಾಲ್ಯಾನ್, ಪ್ರಮೋದ್ ಸಾಲ್ಯಾನ್, ಕೃಷ್ಣ ಎಂಬವರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದೆ. ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚೆನ್ನಕೇಶವ(33), ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಪುಷ್ಪರಾಜ್(20), ನಾವೂರು ಗ್ರಾಮದ ಪ್ರಮೋದ್ ಸಾಲ್ಯಾನ್(49), ಹೊಳೆನರಸೀಪುರ ತಾಲೂಕಿನ ಹಳೆಕೋಟೆ ನಿವಾಸಿ ಸಂದೀಪ್ (27) ಬಂಧಿತರು.
ಜಾನುವಾರುಗಳ ಒಟ್ಟು ಮೌಲ್ಯ 65 ಸಾವಿರ ಹಾಗೂ ವಾಹನಗಳ ಮೌಲ್ಯ 7 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಪಕ್ಷದ ಮುಖಂಡರಿಗೆ ಗೊತ್ತಿದ್ದೇ ಗೋವುಗಳನ್ನು ಅಕ್ರಮ ಸಾಗಿಸುವ ಕೆಲಸ ಮಾಡುತ್ತಿದ್ದಾರೆಯೇ ಎಂಬ ಸಂಶಯ ಉಂಟಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Mangalore Transporting cattle illegally Beltangady Four BJP workers arrested. Dharmasthala police arrested four people, in connection with transporting cattle in an inhumane manner in three vehicles.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm