ಬ್ರೇಕಿಂಗ್ ನ್ಯೂಸ್
13-07-23 10:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 13: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಇಬ್ಬರು ಖದೀಮರು ಕಾರಿನ ಕೀ ಪಡೆದು ಎರಡು ಕಾರು ಮತ್ತು ಬೆಲೆಬಾಳುವ ಸೊತ್ತುಗಳನ್ನು ಎಗರಿಸಿದ್ದಾರೆ.
ಜುಲೈ 11ರ ರಾತ್ರಿ ಕಳ್ಳತನ ಕೃತ್ಯ ನಡೆದಿದ್ದು ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿಗೆ ತಡರಾತ್ರಿ ಕಳ್ಳರು ನುಗ್ಗಿದ್ದರು. ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ನುಗ್ಗಿದ್ದ ಕಳ್ಳರು, ಒಳಗೆ ಡ್ರಾವರ್ ನಲ್ಲಿ ತಡಕಾಡಿದ್ದಾರೆ. ಡ್ರಾವರಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಸ್ವಿಫ್ಟ್ ಮತ್ತು ಕ್ರೆಟಾ ಕಾರುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ.






6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಹಾಗೂ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕಳವು ಮಾಡಿದ್ದಾರೆಂದು ಅಬಿದ್ ಅಹ್ಮದ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇಬ್ಬರು ಆಗಂತುಕರು ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿದ್ದರು. ಗ್ಲಾಸ್ ಒಡೆಯುವ ದೃಶ್ಯ, ಕಾರು ಎಸ್ಕೇಪ್ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದ್ದು ಅದನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thieves break into used car showroom, steal cars, valuables worth lakhs at Hosabettu Junction. The car showroom is owned by Abdi Ahmed Suralpady. The gang entered the showroom by breaking open the front glass door.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm