ಬ್ರೇಕಿಂಗ್ ನ್ಯೂಸ್
13-07-23 10:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 13: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಇಬ್ಬರು ಖದೀಮರು ಕಾರಿನ ಕೀ ಪಡೆದು ಎರಡು ಕಾರು ಮತ್ತು ಬೆಲೆಬಾಳುವ ಸೊತ್ತುಗಳನ್ನು ಎಗರಿಸಿದ್ದಾರೆ.
ಜುಲೈ 11ರ ರಾತ್ರಿ ಕಳ್ಳತನ ಕೃತ್ಯ ನಡೆದಿದ್ದು ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿಗೆ ತಡರಾತ್ರಿ ಕಳ್ಳರು ನುಗ್ಗಿದ್ದರು. ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ನುಗ್ಗಿದ್ದ ಕಳ್ಳರು, ಒಳಗೆ ಡ್ರಾವರ್ ನಲ್ಲಿ ತಡಕಾಡಿದ್ದಾರೆ. ಡ್ರಾವರಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಸ್ವಿಫ್ಟ್ ಮತ್ತು ಕ್ರೆಟಾ ಕಾರುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ.






6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಹಾಗೂ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕಳವು ಮಾಡಿದ್ದಾರೆಂದು ಅಬಿದ್ ಅಹ್ಮದ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇಬ್ಬರು ಆಗಂತುಕರು ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿದ್ದರು. ಗ್ಲಾಸ್ ಒಡೆಯುವ ದೃಶ್ಯ, ಕಾರು ಎಸ್ಕೇಪ್ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದ್ದು ಅದನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thieves break into used car showroom, steal cars, valuables worth lakhs at Hosabettu Junction. The car showroom is owned by Abdi Ahmed Suralpady. The gang entered the showroom by breaking open the front glass door.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm