ಬ್ರೇಕಿಂಗ್ ನ್ಯೂಸ್
13-07-23 10:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 13: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ ಹಾಕಿದ ಇಬ್ಬರು ಖದೀಮರು ಕಾರಿನ ಕೀ ಪಡೆದು ಎರಡು ಕಾರು ಮತ್ತು ಬೆಲೆಬಾಳುವ ಸೊತ್ತುಗಳನ್ನು ಎಗರಿಸಿದ್ದಾರೆ.
ಜುಲೈ 11ರ ರಾತ್ರಿ ಕಳ್ಳತನ ಕೃತ್ಯ ನಡೆದಿದ್ದು ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿಗೆ ತಡರಾತ್ರಿ ಕಳ್ಳರು ನುಗ್ಗಿದ್ದರು. ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ನುಗ್ಗಿದ್ದ ಕಳ್ಳರು, ಒಳಗೆ ಡ್ರಾವರ್ ನಲ್ಲಿ ತಡಕಾಡಿದ್ದಾರೆ. ಡ್ರಾವರಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಸ್ವಿಫ್ಟ್ ಮತ್ತು ಕ್ರೆಟಾ ಕಾರುಗಳನ್ನು ಎಗರಿಸಿಕೊಂಡು ಹೋಗಿದ್ದಾರೆ.






6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು, 9 ಲಕ್ಷ ಮೌಲ್ಯದ ಕ್ರೇಟಾ ಕಾರು ಹಾಗೂ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕಳವು ಮಾಡಿದ್ದಾರೆಂದು ಅಬಿದ್ ಅಹ್ಮದ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 15 ಲಕ್ಷ ಮೌಲ್ಯದ ಸೊತ್ತುಗಳ ಕಳ್ಳತನ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇಬ್ಬರು ಆಗಂತುಕರು ಹೆಲ್ಮೆಟ್ ಹಾಗೂ ರೈನ್ ಜಾಕೆಟ್ ಹಾಕಿದ್ದರು. ಗ್ಲಾಸ್ ಒಡೆಯುವ ದೃಶ್ಯ, ಕಾರು ಎಸ್ಕೇಪ್ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದ್ದು ಅದನ್ನು ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thieves break into used car showroom, steal cars, valuables worth lakhs at Hosabettu Junction. The car showroom is owned by Abdi Ahmed Suralpady. The gang entered the showroom by breaking open the front glass door.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm