ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm