ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm