ಬ್ರೇಕಿಂಗ್ ನ್ಯೂಸ್
17-07-23 02:09 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 17: ಪತ್ನಿಯ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪತಿ ಹಾಗೂ ಆತನ ಸಹಚರನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಏಳು ತಿಂಗಳ ನಂತರ ಪ್ರಕರಣ ಭೇದಿಸಲಾಗಿದೆ.
ಆರೋಪಿಗಳನ್ನು ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅರವಿಂದ್ (24) ಮತ್ತು ಚಾಲಕ ಉದಯ್ ಕುಮಾರ್ (40) ಎಂದು ಗುರುತಿಸಲಾಗಿದೆ. ಕಳೆದ ವರ್ಷ ಚೈತನ್ಯ (22) ಅವರನ್ನು ವಿವಾಹವಾಗಿದ್ದ ಅರವಿಂದ್ ಹೊಸಕೋಟೆಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಚೈತನ್ಯ ತನ್ನ ಪತಿಯನ್ನು ಪೋಷಕರಿಂದ ಪ್ರತ್ಯೇಕವಾಗಿ ವಾಸಿಸುವಂತೆ ಒತ್ತಾಯಿಸುತ್ತಿದ್ದರಿಂದ ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಇದು ವೈವಾಹಿಕ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು. ಅರವಿಂದ್ ವಿಚ್ಛೇದನಕ್ಕೆ ಬೇಡಿಕೆ ಇಟ್ಟಿದ್ದ ಆದರೆ ಆಕೆ ಗರ್ಭಿಣಿಯಾಗಿದ್ದರಿಂದ ಅದನ್ನು ನಿರಾಕರಿಸಿ ಪೋಷಕರ ಮನೆಗೆ ಮರಳಿದ್ದಳು.
ಆರೋಪಿ ಅರವಿಂದನಿಗೆ ಕೆಲ ವರ್ಷಗಳಿಂದ ಲಾರಿ ಚಾಲಕ ಉದಯ್ಕುಮಾರ್ ಪರಿಚಯವಿತ್ತು. ಹೀಗಾಗಿ ಉದಯ್ನನ್ನು ಸಂಪರ್ಕಿಸಿ ಪತ್ನಿ ಚೈತನ್ಯಾಳನ್ನು ಅಪಘಾತ ಮಾಡಿ ಕೊಲೆ ಮಾಡುವ ಸಂಚಿನ ಬಗ್ಗೆ ತಿಳಿಸಿದ್ದ. ಈ ಕೆಲಸ ಮಾಡಲು ಉದಯ್ಗೆ 1.50 ಲಕ್ಷವನ್ನೂ ನೀಡಿದ್ದ. ಅದರಂತೆ ಉದಯ್ .40 ಸಾವಿರ ಕೊಟ್ಟು ಹಳೇ ಟಾಟಾ ಸುಮೋ ಕಾರು ಖರೀದಿಸಿದ್ದ. ಬಳಿಕ ಆರೋಪಿಗಳಿಬ್ಬರೂ ಚೈತನ್ಯಾ ಓಡಾಡುವ ಸ್ಥಳಗಳ ಬಗ್ಗೆ ಕೆಲ ದಿನ ನಿಗಾವಹಿಸಿದ್ದರು. ಚೈತನ್ಯಾ ಸಂಚಾರದ ಮಾರ್ಗದಲ್ಲಿ ಎಲ್ಲೆಲ್ಲಿ ಸಿಸಿಟಿವಿ ಕ್ಯಾಮರಾಗಳು ಇವೆ ಎಂಬುದನ್ನೂ ಗಮನಿಸಿದ್ದರು.

ಅದರಂತೆ ಜ.1ರಂದು ಚೈತನ್ಯಾ ಭರತ ನಾಟ್ಯ ತರಗತಿ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಬಾಗಲೂರಿನ ಕೆಐಡಿಬಿ ಲೇಔಟ್ನ ನಿರ್ಜನ ಪ್ರದೇಶದಲ್ಲಿ ಬರುವಾಗ ಆರೋಪಿಗಳು ಟಾಟಾ ಸುಮೋದಲ್ಲಿ ಏಕಾಏಕಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಚೈತನ್ಯಾರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಚೈತನ್ಯಾ ಪ್ರಾಣಾಪಾಯದಿಂದ ಪಾರಾದರು. ಈ ಸಂಬಂಧ ಏರ್ಪೋರ್ಚ್ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು. ಆದರೆ, ಚೈತನ್ಯ ಪೋಷಕರು ಅಪಘಾತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಾಗಲೂರು ಠಾಣೆ ಪೊಲೀಸರು ಕೊಲೆಗೆ ಯತ್ನ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಅಪಘಾತ ಮಾಡಿದ ಕಾರಿಗಾಗಿ ಹುಡುಕಾಟ ನಡೆಸಿದ್ದರೂ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಅಪಘಾತ ನಡೆದ ಸ್ಥಳಕ್ಕೆ ಹೊಂದಿಕೊಂಡಂತ ವಿವಿಧ ರಸ್ತೆಗಳಲ್ಲಿ ಸಿಸಿಟಿವಿ ಪರಿಶೀಲಿಸಿದಾಗ ಕಾರು ಗುರುತು ಪತ್ತೆಯಾಗಿದ್ದು, ಕಾರು ಮಾಲೀಕನನ್ನು ಸಂಪರ್ಕಿಸಿದಾಗ ಅದನ್ನು ಕೆಲ ತಿಂಗಳ ಹಿಂದೆ ಅರವಿಂದ್ ಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ನಂತರ ಅರವಿಂದ್ ವಿಚಾರಣೆ ನಡೆಸಿದಾಗ ಅದು ಅಪಘಾತವಲ್ಲಾ, ಕೊಲೆ ಮಾಡಲು ಮಾಡಿದ ಸ್ಕೆಚ್ ಎಂಬುದು ತಿಳಿದುಬಂದಿದೆ. ಕೇಸ್ ನ್ನು ಬಾಗಲೂರು ಠಾಣೆಗೆ ವರ್ಗಾಯಿಸಿದ್ದು, ಅರವಿಂದ್ ನೀಡಿದ ಮಾಹಿತಿ ಆಧಾರದ ಮೇಲೆ ಉದಯ್ ನನ್ನು ಬಂಧಿಸಲಾಗಿದೆ.
The Bangalore police have arrested a man and his accomplice for trying to kill his wife by ramming their car into her two-wheeler. The matter came to light more than seven months after the incident.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm