ಬ್ರೇಕಿಂಗ್ ನ್ಯೂಸ್
18-07-23 03:23 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.
ಶರತ್ ಕುಡಿತದ ಚಟ ಅಂಟಿಸಿಕೊಂಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸೋಮವಾರ ಸಂಜೆ ಶರತ್ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್ನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.

ಶಾಂತ ಹಾಗೂ ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ನೆಲಸಿದ್ದರು. ಶಾಂತ ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದು ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ತಂದೆ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಆರೋಪಿ ಶರತ್ ಕಿರಿಯ ಮಗ. ಶರತ್ ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಅಪ್ಪ-ಅಮ್ಮನಿಗೆ ರಾಡ್ನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಮನೆ ಡೋರ್ ಲಾಕ್ ಮಾಡಿ ಪರಾರಿ ಆಗಿದ್ದಾನೆ.

ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್ಗಾಗಿ ಹುಡುಕಾಟ ನಡೆಸಿದ್ದಾರೆ.
Drunkard psycho son kills both father and mother native of Mangalore in Bangalore using the rod. The deceased has been identified as Bhaskar and Shantha. Murder son Sharath is said to be absconding.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm