ಬ್ರೇಕಿಂಗ್ ನ್ಯೂಸ್
18-07-23 03:23 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.
ಶರತ್ ಕುಡಿತದ ಚಟ ಅಂಟಿಸಿಕೊಂಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸೋಮವಾರ ಸಂಜೆ ಶರತ್ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್ನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.

ಶಾಂತ ಹಾಗೂ ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ನೆಲಸಿದ್ದರು. ಶಾಂತ ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದು ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ತಂದೆ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಆರೋಪಿ ಶರತ್ ಕಿರಿಯ ಮಗ. ಶರತ್ ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಅಪ್ಪ-ಅಮ್ಮನಿಗೆ ರಾಡ್ನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಮನೆ ಡೋರ್ ಲಾಕ್ ಮಾಡಿ ಪರಾರಿ ಆಗಿದ್ದಾನೆ.

ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್ಗಾಗಿ ಹುಡುಕಾಟ ನಡೆಸಿದ್ದಾರೆ.
Drunkard psycho son kills both father and mother native of Mangalore in Bangalore using the rod. The deceased has been identified as Bhaskar and Shantha. Murder son Sharath is said to be absconding.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm