ಬ್ರೇಕಿಂಗ್ ನ್ಯೂಸ್
18-07-23 03:23 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 18: ಕುಡಿತದ ಮತ್ತಿನಲ್ಲಿ ಮಗನೇ ತನ್ನ ತಂದೆ, ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬ್ಯಾಟರಾಯನಪುರದಲ್ಲಿ ಬೆಳಕಿಗೆ ಬಂದಿದೆ. ತಾಯಿ ಶಾಂತ (60) ಮತ್ತು ತಂದೆ ಭಾಸ್ಕರ್ (63) ಕೊಲೆಯಾದ ದುರ್ದೈವಿಗಳು. ಶರತ್ (26) ಎಂಬಾತ ಕೃತ್ಯ ಎಸಗಿದ್ದಾನೆ.
ಶರತ್ ಕುಡಿತದ ಚಟ ಅಂಟಿಸಿಕೊಂಡಿದ್ದು ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಸೋಮವಾರ ಸಂಜೆ ಶರತ್ ತಂದೆ, ತಾಯಿ ಮೇಲೆ ಎರಗಿ ಏಕಾಏಕಿ ರಾಡ್ನಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಮನೆಯಲ್ಲಿ ಶರತ್ ಗಲಾಟೆ ಮಾಡಿ ಅಪ್ಪ ಅಮ್ಮನಿಗೆ ಹೊಡೆಯುವುದು ಮಾಡುತ್ತಿದ್ದ ಎನ್ನಲಾಗಿದೆ.

ಶಾಂತ ಹಾಗೂ ಭಾಸ್ಕರ್ ದಂಪತಿ ಮಂಗಳೂರು ಮೂಲದವರಾಗಿದ್ದು, 12 ವರ್ಷಗಳ ಹಿಂದೆ ಬೆಂಗಳೂರಿನಲ್ಲಿಯೇ ನೆಲಸಿದ್ದರು. ಶಾಂತ ಕೇಂದ್ರ ಸರ್ಕಾರದ ಸಿಬ್ಬಂದಿ ಆಗಿದ್ದು ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ತಂದೆ ಭಾಸ್ಕರ್ ಖಾಸಗಿ ಕ್ಯಾಂಟೀನ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಆರೋಪಿ ಶರತ್ ಕಿರಿಯ ಮಗ. ಶರತ್ ಕೆಲವೊಮ್ಮೆ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ ಸೋಮವಾರ ಸಂಜೆ ಕುಡಿದು ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಅಪ್ಪ-ಅಮ್ಮನಿಗೆ ರಾಡ್ನಿಂದ ಹೊಡೆದು ಕೊಂದಿದ್ದಾನೆ. ಬಳಿಕ ಮನೆ ಡೋರ್ ಲಾಕ್ ಮಾಡಿ ಪರಾರಿ ಆಗಿದ್ದಾನೆ.

ದಂಪತಿಯ ದೊಡ್ಡ ಮಗ ಇಂದು ಬೆಳಗ್ಗೆ ತಂದೆ-ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ್ದರಿಂದ ಅನುಮಾನಗೊಂಡು ಪಕ್ಕದ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಈ ವೇಳೆ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದು ಬಂದಿದೆ.
ಸ್ಥಳೀಯರು ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ದೌಡಾಯಿಸಿದ್ದು, ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಾಪತ್ತೆ ಆಗಿರುವ ಶರತ್ಗಾಗಿ ಹುಡುಕಾಟ ನಡೆಸಿದ್ದಾರೆ.
Drunkard psycho son kills both father and mother native of Mangalore in Bangalore using the rod. The deceased has been identified as Bhaskar and Shantha. Murder son Sharath is said to be absconding.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm