ಬ್ರೇಕಿಂಗ್ ನ್ಯೂಸ್
20-07-23 11:23 am Mangalore Correspondent ಕ್ರೈಂ
ಉಳ್ಳಾಲ, ಜು.20: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಸಂಘರ್ಷ ಉಂಟಾಗಿದ್ದು , ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ ಘಟನೆ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.
ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೆ ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನಂತೆ. ಏಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಹರಿತ ಚೂರಿ ತೆಗೆದು ಹಲ್ಲೆಗೈದವನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಬಲ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದು ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿ ಶಾಲಾ ತರಗತಿ ಕೊಠಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎನ್ನಲಾಗುತ್ತಿದೆ.

ಘಟನೆಯ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಧನ್ಯ ನಾಯಕ್, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಗೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಮಕ್ಕಳ ನ್ಯಾಯಾಲಯಕ್ಕೆ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಇಂದು ಕೂಡಾ ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸಂಘರ್ಷಕ್ಕೊಳಗಾದ ಇಬ್ಬರು ವಿದ್ಯಾರ್ಥಿಗಳು ಅಲ್ಪ ಸಂಖ್ಯಾತ ಸಮುದಾಯದವರಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಸಹಪಾಠಿಯ ಮೇಲೆ ದಾಳಿ ನಡೆಸಿದ್ದು ಆಘಾತಕಾರಿ ವಿಚಾರವಾಗಿದೆ. ಬಾಲಕನ ಬ್ಯಾಗಲ್ಲಿ ಚಾಕು ಹೇಗೆ ಬಂತು..? ವಿದ್ಯಾರ್ಥಿಗಳ ನಡುವೆ ದ್ವೇಷ ಇತ್ತೇ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 9th std Student stabbed on chest in knife over fight regarding Sambar being accidentally dropped on uniform by his classmate at Naringana Karnataka Public School.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm