ಬ್ರೇಕಿಂಗ್ ನ್ಯೂಸ್
20-07-23 11:23 am Mangalore Correspondent ಕ್ರೈಂ
ಉಳ್ಳಾಲ, ಜು.20: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಸಂಘರ್ಷ ಉಂಟಾಗಿದ್ದು , ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ ಘಟನೆ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.
ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೆ ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನಂತೆ. ಏಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಹರಿತ ಚೂರಿ ತೆಗೆದು ಹಲ್ಲೆಗೈದವನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಬಲ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದು ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿ ಶಾಲಾ ತರಗತಿ ಕೊಠಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎನ್ನಲಾಗುತ್ತಿದೆ.

ಘಟನೆಯ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಧನ್ಯ ನಾಯಕ್, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಗೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಮಕ್ಕಳ ನ್ಯಾಯಾಲಯಕ್ಕೆ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಇಂದು ಕೂಡಾ ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸಂಘರ್ಷಕ್ಕೊಳಗಾದ ಇಬ್ಬರು ವಿದ್ಯಾರ್ಥಿಗಳು ಅಲ್ಪ ಸಂಖ್ಯಾತ ಸಮುದಾಯದವರಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಸಹಪಾಠಿಯ ಮೇಲೆ ದಾಳಿ ನಡೆಸಿದ್ದು ಆಘಾತಕಾರಿ ವಿಚಾರವಾಗಿದೆ. ಬಾಲಕನ ಬ್ಯಾಗಲ್ಲಿ ಚಾಕು ಹೇಗೆ ಬಂತು..? ವಿದ್ಯಾರ್ಥಿಗಳ ನಡುವೆ ದ್ವೇಷ ಇತ್ತೇ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 9th std Student stabbed on chest in knife over fight regarding Sambar being accidentally dropped on uniform by his classmate at Naringana Karnataka Public School.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm