ಬ್ರೇಕಿಂಗ್ ನ್ಯೂಸ್
20-07-23 11:23 am Mangalore Correspondent ಕ್ರೈಂ
ಉಳ್ಳಾಲ, ಜು.20: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಸಂಘರ್ಷ ಉಂಟಾಗಿದ್ದು , ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ ಘಟನೆ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ.
ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೆ ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನಂತೆ. ಏಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಹರಿತ ಚೂರಿ ತೆಗೆದು ಹಲ್ಲೆಗೈದವನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಬಲ ಎದೆ ಭಾಗದ ಪಕ್ಕಕ್ಕೆ ಚೂರಿ ಚುಚ್ಚಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ವೈಸ್ ಪ್ರಿನ್ಸಿಪಾಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದು ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿ ಶಾಲಾ ತರಗತಿ ಕೊಠಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎನ್ನಲಾಗುತ್ತಿದೆ.

ಘಟನೆಯ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ಧನ್ಯ ನಾಯಕ್, ಕೊಣಾಜೆ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ ಸೇರಿದಂತೆ ಅಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಗೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಮಕ್ಕಳ ನ್ಯಾಯಾಲಯಕ್ಕೆ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಇಂದು ಕೂಡಾ ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಸಂಘರ್ಷಕ್ಕೊಳಗಾದ ಇಬ್ಬರು ವಿದ್ಯಾರ್ಥಿಗಳು ಅಲ್ಪ ಸಂಖ್ಯಾತ ಸಮುದಾಯದವರಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಸಹಪಾಠಿಯ ಮೇಲೆ ದಾಳಿ ನಡೆಸಿದ್ದು ಆಘಾತಕಾರಿ ವಿಚಾರವಾಗಿದೆ. ಬಾಲಕನ ಬ್ಯಾಗಲ್ಲಿ ಚಾಕು ಹೇಗೆ ಬಂತು..? ವಿದ್ಯಾರ್ಥಿಗಳ ನಡುವೆ ದ್ವೇಷ ಇತ್ತೇ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 9th std Student stabbed on chest in knife over fight regarding Sambar being accidentally dropped on uniform by his classmate at Naringana Karnataka Public School.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm