ಬ್ರೇಕಿಂಗ್ ನ್ಯೂಸ್
21-07-23 07:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಮಂಗಳೂರು ನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆಯ ಮೊಹಮ್ಮದ್ ನಿಯಾಜ್ (28), ತಲಪಾಡಿ ಕೆಸಿ ರೋಡಿನ ನಿಶಾದ್ (31), ಮಹಮ್ಮದ್ ರಜೀನ್ (24) ಬಂಧಿತರು. ಕೇರಳದ ಗಡಿಭಾಗ ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಸಿಲ್ವರ್ ಮತ್ತು ಕಪ್ಪು ಬಣ್ಣದ ಎರಡು ಸ್ವಿಫ್ಟ್ ಕಾರಿನಲ್ಲಿದ್ದುಕೊಂಡು ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ಮೌಲ್ಯದ 180 ಗ್ರಾಮ್ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಎರಡು ಮಾರುತಿ ಸ್ವಿಫ್ಟ್ ಕಾರು, ನಾಲ್ಕು ಮೊಬೈಲ್ ಫೋನ್, 22 ಸಾವಿರ ರೂ. ನಗದು, ಒಂದು ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂವರು ಡ್ರಗ್ ಕಿಂಗ್ ಪಿನ್ ಗಳಲ್ಲಿ ಒಬ್ಬ
ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಜ್ ಮಂಗಳೂರು ಮಹಾನಗರಕ್ಕೆ ಎಂಡಿಎಂಎ ಡ್ರಗ್ಸ್ ಪೂರೈಸುವ ಮೂವರು ಕಿಂಗ್ ಪಿನ್ ಗಳ ಪೈಕಿ ಒಬ್ಬನಾಗಿದ್ದು ಈತನ ಬಂಧನಕ್ಕಾಗಿ ಪೊಲೀಸರು ಹಲವು ಸಮಯದಿಂದ ಹೊಂಚು ಹಾಕಿದ್ದರು. ಆದರೆ ಮೊಬೈಲ್ ಫೋನಲ್ಲಿ ವಾಟ್ಸಪ್ ಕರೆ ಮಾತ್ರ ಮಾಡುವುದು, ಒಂದು ಕಡೆಗೆ ಹೋದ ದಿನ ಮತ್ತೆ ಹೋಗದೇ ಇರುವುದು, ಹೀಗೆ ಪೊಲೀಸರು ಬೆನ್ನು ಬಿದ್ದಾಗ ಕೈಗೆ ಸಿಗದೆ ತಲೆಮರೆಸಿಕೊಳ್ಳುತ್ತಿದ್ದ. ಬೆಂಗಳೂರಿನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಹಂಚಿಕೆ ಮಾಡುತ್ತಿದ್ದವರಲ್ಲಿ ಈತನೂ ಒಬ್ಬನಾಗಿದ್ದ.
ಈ ಹಿಂದೆ ಮಂಗಳೂರಿನ ಉರ್ವಾ ಠಾಣೆಯ ಎಎಸ್ಐಗೆ ಚೂರಿಯಿಂದ ಇರಿದು ಹಲ್ಲೆಗೆ ಯತ್ನಿಸಿದ ಪ್ರಕರಣ, ಕೊಣಾಜೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿಗೆ ಹಲ್ಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಸೈಬರ್ ಕ್ರೈಂ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಠಾಣೆಯಲ್ಲಿ ಎರಡು ದರೋಡೆ ಪ್ರಕರಣ, ಮಂಗಳೂರಿನ ಕಂಕನಾಡಿ ನಗರ, ಕೊಣಾಜೆ ಠಾಣೆ ಸೇರಿದಂತೆ ಮೊಹಮ್ಮದ್ ನಿಯಾಜ್ ಹತ್ತು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಹಲವು ಕೋರ್ಟ್ ವಾರೆಂಟ್ ಗಳಿದ್ದರೂ, ಪೊಲೀಸರ ತಲೆತಪ್ಪಿಸಿಕೊಂಡು ಆಯಕಟ್ಟಿನ ಪೆಡ್ಲರ್ ಗಳಿಗೆ ಡ್ರಗ್ ಪೂರೈಸುತ್ತಿದ್ದ. ನಿಯಾಜ್ ಜೊತೆಗಿದ್ದ ಇನ್ನಿಬ್ಬರು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Three drug peddlers were arrested by Mangaluru city crime branch police. MDMA, pistol and many other items were seized from them.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am