ಬ್ರೇಕಿಂಗ್ ನ್ಯೂಸ್
22-07-23 04:59 pm Udupi Correspondent ಕ್ರೈಂ
ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಉಡುಪಿಯ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ನಡೆದಿತ್ತು.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೇ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಅಲ್ಲದೆ, ಕಾಲೇಜು ಆಡಳಿತಕ್ಕೂ ದೂರು ನೀಡಿದ್ದರು. ಬಳಿಕ ಆಡಳಿತ ಮಂಡಳಿಯೇ ಮೂವರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸುವ ನಿರ್ಧಾರಕ್ಕೆ ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿವೆ. ಆದರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪೊಲೀಸರಿಗೆ ದೂರು ನೀಡಿಲ್ಲ. ಹೀಗಾಗಿ ಸರ್ವ ಕಾಲೇಜು ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ತನಿಖೆ ಒತ್ತಾಯಿಸಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.
Udupi Three girl students suspended from college for placing hidden camera in toilet. It is alleged that they were recording videos and sending them on whatspp groups.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm