ಬ್ರೇಕಿಂಗ್ ನ್ಯೂಸ್
25-07-23 04:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 25: ಇತ್ತೀಚೆಗೆ ಹೊಸಬೆಟ್ಟು ಬಳಿಯ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಳಿಗೆಯಿಂದ ಎರಡು ಕಾರುಗಳನ್ನು ಕಳವುಗೈದ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 12ರಂದು ರಾತ್ರಿ ಹೊಸಬೆಟ್ಟಿನ ಕಾರು ಮಾರ್ಟ್ ನಲ್ಲಿ ಕಳವು ಕೃತ್ಯ ನಡೆದಿತ್ತು. ಆರೋಪಿಗಳು ರೇನ್ ಕೋಟ್ ಧರಿಸಿ ಕಚೇರಿಯ ಒಳನುಗ್ಗಿದ್ದು ಬಳಿಕ ಡ್ರಾವರ್ ನಿಂದ ಕೀ ಪಡೆದು ಕ್ರೆಟಾ ಮತ್ತು ಸ್ವಿಫ್ಟ್ ಕಾರನ್ನು ಎಗರಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಕಾರು ಮಳಿಗೆಯ ಮಾಲಕ ಅಬೀದ್ ಅಹ್ಮದ್ ಸೂರಲ್ಪಾಡಿ, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಕಳವಾದ ಕಾರುಗಳ ಪತ್ತೆಗಾಗಿ ಪೊಲೀಸರು ಜುಲೈ 22ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಅಪ್ರಾಪ್ತ ಯುವಕನೊಬ್ಬ ಕಾರು ಚಲಾಯಿಸಿಕೊಂಡು ಬಂದು ಸಿಕ್ಕಿಬಿದ್ದಿದ್ದ. ತಪಾಸಣೆ ವೇಳೆ ಕಳವುಗೈದ ಕಾರು ಎಂದು ತಿಳಿದುಬಂದಿದ್ದು ಇನ್ನೊಬ್ಬ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆತ ನೀಡಿದ ಮಾಹಿತಿಯಂತೆ ಕಿನ್ನಿಪದವು ನಿವಾಸಿ ಮಹಮ್ಮದ್ ಶಫೀಕ್ (21) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಕಡದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶಫೀಕ್ ನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಕಳವುಗೈದು ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ಇರಿಸಿದ್ದ ಕ್ರೆಟಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಉಪಯೋಗಿಸಿದ್ದ ಸುತ್ತಿಗೆ, ರೇನ್ ಕೋಟ್ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಶಫೀಕ್ ಒಂದು ವರ್ಷದ ಹಿಂದೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಕೆಸರುಗದ್ದೆ ಎಂಬಲ್ಲಿ ಮನೆಯಿಂದ ದ್ವಿಚಕ್ರ ವಾಹನ ಕಳವುಗೈದಿದ್ದು ಅದನ್ನೂ ವಶಕ್ಕೆ ಪಡೆಯಲಾಗಿದೆ. ಒಟ್ಟು ವಶಕ್ಕೆ ಪಡೆದ ವಾಹನಗಳ ಮೌಲ್ಯ 15 ಲಕ್ಷ ಆಗಿರುತ್ತದೆ. ಆರೋಪಿ ಶಫೀಕ್ ನನ್ನು ಪೊಲೀಸರು ಕೋರ್ಟಿಗೆ ಹಾಜರು ಪಡಿಸಿ ಮೂರು ದಿನ ಕಸ್ಟಡಿಗೆ ಪಡೆದಿದ್ದಾರೆ. ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
Mangalore second hand car robbery, Police swift action two arrested including Minor by Surathkal Inspector Mahesh Prasad. The thieves were arrested for stealing two cars and other valuables from the used car showroom at Suratkal on July 12.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm