ಬ್ರೇಕಿಂಗ್ ನ್ಯೂಸ್
27-07-23 12:19 pm Mangalore Correspondent ಕ್ರೈಂ
ಮಂಗಳೂರು, ಜುಲೈ 27: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-1) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನ್ಯಾಯಾಧೀಶೆ ಮಂಜುಳಾ ಇಟ್ಟಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ವ್ಯಕ್ತಿ. 2014ರ ಆ.1ರಿಂದ 2016ರ ಸೆ.2ರ ನಡುವೆ ಪ್ರೌಢ ಶಾಲೆಯ ವಿದ್ಯಾರ್ಥಿಯನ್ನು ಹಲವು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೃಥ್ವಿರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿಯನ್ನು ಪೃಥ್ವಿರಾಜ್ ತನ್ನ ಮನೆಗೆ ಕರೆಸಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಇದನ್ನು ಯಾರಿಗಾದರೂ ಹೇಳಿದರೆ ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ, ಹಾಜರಾತಿ ಕಡಿತ ಮಾಡುತ್ತೇನೆ ಎಂದು ಬೆದರಿಸಿದ್ದ. ಬಾಲಕನ ಮರ್ಮಾಂಗದಲ್ಲಿ ಗಾಯವಾದ ಬಳಿಕ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ವೇಳೆ ಬಾಲಕ ತನ್ನ ಮೇಲಿನ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಅಂದಿನ ಸುರತ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಚೆಲುವರಾಜ್ ಬಿ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ, ಆರೋಪ ದೃಢಪಟ್ಟಿರುವುದರಿಂದ ತಪ್ಪಿತಸ್ಥನೆಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಅಪರಾಧಿಗೆ ಪೋಕ್ಸೊ ಕಾಯ್ದೆ ಸೆಕ್ಷನ್ 6ರಡಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿಣ ಸಜೆ, ಪೋಕ್ಸೊ ಸೆಕ್ಷನ್ 10ರಂತೆ 5 ವರ್ಷ ಸಾದಾ ಸಜೆ, ಐದು ಸಾವಿರ ರೂ ದಂಡ ಮತ್ತು ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾದಾ ಸಜೆ, ಐಪಿಸಿ ಸೆಕ್ಷನ್ 377ರಡಿ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಮೂರು ತಿಂಗಳ ಕಠಿಣ ಸಜೆ, ಐಪಿಸಿ 506ರಡಿ 1 ವರ್ಷ ಸಾದಾ ಸಜೆ, ಒಂದು ಸಾವಿರ ರೂ.ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪಿತ್ತಿದ್ದಾರೆ.
ಸಂತ್ರಸ್ತ ಬಾಲಕನಿಗೆ ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.
Mangalore High school teacher gets life sentence for natural sex with student, sexual assault. Teacher Prithviraj had sexually assulted the student from 2014-2016.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm