ಬ್ರೇಕಿಂಗ್ ನ್ಯೂಸ್
27-07-23 12:19 pm Mangalore Correspondent ಕ್ರೈಂ
ಮಂಗಳೂರು, ಜುಲೈ 27: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-1) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನ್ಯಾಯಾಧೀಶೆ ಮಂಜುಳಾ ಇಟ್ಟಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ವ್ಯಕ್ತಿ. 2014ರ ಆ.1ರಿಂದ 2016ರ ಸೆ.2ರ ನಡುವೆ ಪ್ರೌಢ ಶಾಲೆಯ ವಿದ್ಯಾರ್ಥಿಯನ್ನು ಹಲವು ಬಾರಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒಳಪಡಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೃಥ್ವಿರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ವಿದ್ಯಾರ್ಥಿಯನ್ನು ಪೃಥ್ವಿರಾಜ್ ತನ್ನ ಮನೆಗೆ ಕರೆಸಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಇದನ್ನು ಯಾರಿಗಾದರೂ ಹೇಳಿದರೆ ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ, ಹಾಜರಾತಿ ಕಡಿತ ಮಾಡುತ್ತೇನೆ ಎಂದು ಬೆದರಿಸಿದ್ದ. ಬಾಲಕನ ಮರ್ಮಾಂಗದಲ್ಲಿ ಗಾಯವಾದ ಬಳಿಕ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ವೇಳೆ ಬಾಲಕ ತನ್ನ ಮೇಲಿನ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಅಂದಿನ ಸುರತ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದ ಚೆಲುವರಾಜ್ ಬಿ. ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ, ಆರೋಪ ದೃಢಪಟ್ಟಿರುವುದರಿಂದ ತಪ್ಪಿತಸ್ಥನೆಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಅಪರಾಧಿಗೆ ಪೋಕ್ಸೊ ಕಾಯ್ದೆ ಸೆಕ್ಷನ್ 6ರಡಿ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 6 ತಿಂಗಳು ಹೆಚ್ಚುವರಿ ಕಠಿಣ ಸಜೆ, ಪೋಕ್ಸೊ ಸೆಕ್ಷನ್ 10ರಂತೆ 5 ವರ್ಷ ಸಾದಾ ಸಜೆ, ಐದು ಸಾವಿರ ರೂ ದಂಡ ಮತ್ತು ದಂಡ ಪಾವತಿಸಲು ತಪ್ಪಿದರೆ ಮೂರು ತಿಂಗಳ ಸಾದಾ ಸಜೆ, ಐಪಿಸಿ ಸೆಕ್ಷನ್ 377ರಡಿ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಮೂರು ತಿಂಗಳ ಕಠಿಣ ಸಜೆ, ಐಪಿಸಿ 506ರಡಿ 1 ವರ್ಷ ಸಾದಾ ಸಜೆ, ಒಂದು ಸಾವಿರ ರೂ.ದಂಡ, ಒಂದು ವೇಳೆ ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಹೆಚ್ಚುವರಿ ಸಾದಾ ಸಜೆ ವಿಧಿಸಿ ನ್ಯಾಯಾಧೀಶರು ತೀರ್ಪಿತ್ತಿದ್ದಾರೆ.
ಸಂತ್ರಸ್ತ ಬಾಲಕನಿಗೆ ರಾಜ್ಯ ಸರ್ಕಾರ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.
Mangalore High school teacher gets life sentence for natural sex with student, sexual assault. Teacher Prithviraj had sexually assulted the student from 2014-2016.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm