ಬ್ರೇಕಿಂಗ್ ನ್ಯೂಸ್
27-07-23 08:36 pm HK News Desk ಕ್ರೈಂ
ಪುಣೆ, ಜುಲೈ 27: ಪಡೆದ ಸಾಲವನ್ನು ಮರಳಿಸದೆ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು, 47 ವರ್ಷದ ಸಾಲದಾತನೊಬ್ಬ ವ್ಯಕ್ತಿಯ ಎದುರೇ ಆತನ ಹೆಂಡತಿಯನ್ನು ಅತ್ಯಾಚಾರದ ಎಸಗಿದ ಅಮಾನುಷ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
34 ವರ್ಷದ ಮಹಿಳೆ ಮೇಲೆ ಭಯಾನಕ ಕೃತ್ಯವು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಹದಾಸ್ಪರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲೇವಾದೇವಿ ವಹಿವಾಟು ನಡೆಸುವ ಇಮ್ತಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಸಂತ್ರಸ್ತೆಯ ಗಂಡ, ಫೆಬ್ರವರಿಯಲ್ಲಿ ಬಡ್ಡಿರಹಿತ 40 ಸಾವಿರ ರೂ ಹಣ ಸಾಲ ಪಡೆದಿದ್ದ. ಆದರೆ ಅದನ್ನು ಮರಳಿ ಪಾವತಿಸಲು ಆತನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ಶೇಖ್, ದಂಪತಿಯನ್ನು ಹಲವು ಬಾರಿ ಅವಾಚ್ಯವಾಗಿ ನಿಂದಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಲದ ಹಣ ವಾಪಸ್ ಕೇಳಿದರೂ, ಪಾವತಿಸದಿದ್ದರಿಂದ ಕೋಪಗೊಂಡಿದ್ದ ಆರೋಪಿ, ತನ್ನ ಕೃತ್ಯಕ್ಕೆ ಮೊದಲೇ ಸಂಚು ರೂಪಿಸಿದ್ದ. ಹದಾಸ್ಪುರ ಗವರ್ನ್ಮೆಂಟ್ ಕಾಲೊನಿಯಲ್ಲಿ ಯಾರೂ ಇಲ್ಲದ ಸ್ಥಳಕ್ಕೆ ದಂಪತಿಯನ್ನು ಕರೆಸಿಕೊಂಡಿದ್ದ ಶೇಖ್, ಬಾಕಿ ಉಳಿದ ಹಣ ವಾಪಸ್ ನೀಡುವಂತೆ ಆಗ್ರಹಿಸಿದ್ದ. ಅವರ ಬಳಿ ಹಣ ಇರಲಿಲ್ಲ. ತನ್ನ ಬಳಿ ಇದ್ದ ಚಾಕು ಹೊರಗೆ ತೆಗೆದಿದ್ದ ಶೇಖ್, ಸಂತ್ರಸ್ತೆಯ ಗಂಡನಿಗೆ ಚಾಕು ತೋರಿಸಿ ಬೆದರಿಸಿ, ಬಳಿಕ ಆತನ ಎದುರೇ ಮಹಿಳೆ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲದೆ, ತನ್ನ ಅತ್ಯಾಚಾರದ ಕೃತ್ಯವನ್ನು ಆತ ಮೊಬೈಲ್ ಫೋನ್ನಲ್ಲಿ ಚಿತ್ರೀಕರಿಸಿದ್ದ. ಇದಾದ ಬಳಿಕವೂ ತನಗೆ ಲೈಂಗಿಕ ಸುಖ ನೀಡುವಂತೆ ಮಹಿಳೆಯನ್ನು ಪದೇ ಪದೇ ಪೀಡಿಸಲು ಆರಂಭಿಸಿದ್ದ. ಅದಕ್ಕೆ ಆಕೆ ನಿರಾಕರಿಸಿದ್ದಳು. ಇದರಿಂದ ಕುದ್ದು ಹೋಗಿದ್ದ ಆತ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ತಾನು ಚಿತ್ರೀಕರಿಸಿದ್ದ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
A 47-year-old moneylender in Maharashtra's Pune city allegedly raped a woman after her husband failed to repay the loan taken from him, police said today. The incident took place in February this year and the accused has been arrested, a police official said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm