ಬ್ರೇಕಿಂಗ್ ನ್ಯೂಸ್
28-07-23 11:18 am Mangalore Correspondent ಕ್ರೈಂ
ಉಳ್ಳಾಲ, ಜು.28: ಒಂಬತ್ತನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಏನೂ ಇಲ್ವಾ..? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ಎಂದು ಪೀಡಿಸಿ ಎಸ್ಸೆಸೆಲ್ಸಿ ವಿದ್ಯಾರ್ಥಿನಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ಲೈಂಗಿಕ ಕೀಟಲೆ ಕೊಡುತ್ತಿದ್ದ ಅನ್ಯಮತೀಯ ಆಟೋ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿ ಆಟೋ ಚಾಲಕ ತಲೆಮರೆಸಿಕೊಂಡಿದ್ದಾನೆ.
ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಗ್ರಾಮದ ಆಟೋ ರಿಕ್ಷಾ ಚಾಲಕ ಇಕ್ಬಾಲ್ ಎಂಬಾತ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯು ಪೋಷಕರೊಂದಿಗೆ ಕೆಲ ತಿಂಗಳ ಹಿಂದೆ ಆಟೋದಲ್ಲಿ ಮನೆಗೆ ತೆರಳಿದ್ದು ಈ ವೇಳೆ ಆಟೋ ಚಾಲಕ ಇಕ್ಬಾಲ್ ವಿದ್ಯಾರ್ಥಿನಿಯನ್ನ ಮಾತನಾಡಿಸಿದ್ದ ಎನ್ನಲಾಗಿದೆ. ಆನಂತರ, ಇತ್ತೀಚೆಗೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಪೀಡಿಸಿ ಬಾಲಕಿಯ ಕೈ ಮತ್ತು ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ನಿನ್ನೆ ಮನೆಮಂದಿಗೆ ವಿಚಾರ ತಿಳಿಸಿದ್ದಾಳೆ.
ಮನೆಮಂದಿ ಈ ಬಗ್ಗೆ ಚಾಲಕನನ್ನ ಪ್ರಶ್ನಿಸಲು ಕುತ್ತಾರಿನ ಆಟೋ ರಿಕ್ಷಾ ಪಾರ್ಕ್ ಗೆ ತೆರಳಿದ್ದು ಆರೋಪಿ ಅದಾಗಲೇ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಪೋಷಕರು ಕೊಣಾಜೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
Auto driver gives flying kiss to school student, flees after police compliant at Konaje in Mangalore
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm