ಬ್ರೇಕಿಂಗ್ ನ್ಯೂಸ್
28-07-23 11:18 am Mangalore Correspondent ಕ್ರೈಂ
ಉಳ್ಳಾಲ, ಜು.28: ಒಂಬತ್ತನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಏನೂ ಇಲ್ವಾ..? ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು ಎಂದು ಪೀಡಿಸಿ ಎಸ್ಸೆಸೆಲ್ಸಿ ವಿದ್ಯಾರ್ಥಿನಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ಲೈಂಗಿಕ ಕೀಟಲೆ ಕೊಡುತ್ತಿದ್ದ ಅನ್ಯಮತೀಯ ಆಟೋ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿ ಆಟೋ ಚಾಲಕ ತಲೆಮರೆಸಿಕೊಂಡಿದ್ದಾನೆ.
ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಅದೇ ಗ್ರಾಮದ ಆಟೋ ರಿಕ್ಷಾ ಚಾಲಕ ಇಕ್ಬಾಲ್ ಎಂಬಾತ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯು ಪೋಷಕರೊಂದಿಗೆ ಕೆಲ ತಿಂಗಳ ಹಿಂದೆ ಆಟೋದಲ್ಲಿ ಮನೆಗೆ ತೆರಳಿದ್ದು ಈ ವೇಳೆ ಆಟೋ ಚಾಲಕ ಇಕ್ಬಾಲ್ ವಿದ್ಯಾರ್ಥಿನಿಯನ್ನ ಮಾತನಾಡಿಸಿದ್ದ ಎನ್ನಲಾಗಿದೆ. ಆನಂತರ, ಇತ್ತೀಚೆಗೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಪೀಡಿಸಿ ಬಾಲಕಿಯ ಕೈ ಮತ್ತು ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ನಿನ್ನೆ ಮನೆಮಂದಿಗೆ ವಿಚಾರ ತಿಳಿಸಿದ್ದಾಳೆ.
ಮನೆಮಂದಿ ಈ ಬಗ್ಗೆ ಚಾಲಕನನ್ನ ಪ್ರಶ್ನಿಸಲು ಕುತ್ತಾರಿನ ಆಟೋ ರಿಕ್ಷಾ ಪಾರ್ಕ್ ಗೆ ತೆರಳಿದ್ದು ಆರೋಪಿ ಅದಾಗಲೇ ತಲೆಮರೆಸಿಕೊಂಡಿದ್ದಾನೆ. ವಿದ್ಯಾರ್ಥಿನಿ ಪೋಷಕರು ಕೊಣಾಜೆ ಠಾಣೆಗೆ ತೆರಳಿ ದೂರು ದಾಖಲಿಸಿದ್ದು ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ.
Auto driver gives flying kiss to school student, flees after police compliant at Konaje in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm