ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಪಿಎಫ್ ಎಎಸ್ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್ಪಿಎಫ್ ಪೇದೆಯು ಎಎಸ್ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಜೈಪುರ ಎಕ್ಸ್ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm