ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಪಿಎಫ್ ಎಎಸ್ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್ಪಿಎಫ್ ಪೇದೆಯು ಎಎಸ್ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಜೈಪುರ ಎಕ್ಸ್ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am