ಬ್ರೇಕಿಂಗ್ ನ್ಯೂಸ್
31-07-23 05:13 pm HK News Desk ಕ್ರೈಂ
ಮುಂಬೈ, ಜುಲೈ 31: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೆ ರಕ್ಷಣಾ ಪಡೆ ಪೇದೆಯೊಬ್ಬರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಪಿಎಫ್ ಎಎಸ್ಐ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ಆರ್ಪಿಎಫ್ ಪೇದೆಯನ್ನು ಚೇತನ್ ಸಿಂಗ್ ಎಂದು ಗುರುತಿಸಲಾಗಿದ್ದು, ಮುಂಬೈ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ವಾಪಿ ರೈಲು ನಿಲ್ದಾಣ ಹಾಗೂ ಬೋರಿವಲಿ ರೈಲು ನಿಲ್ದಾಣದ ಮಧ್ಯೆ ರೈಲು ಸಂಚರಿಸುತ್ತಿದ್ದಾಗ ಆರ್ಪಿಎಫ್ ಪೇದೆಯು ಎಎಸ್ಐ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಾದ ಬಳಿಕ ಮೂವರು ಪ್ರಯಾಣಿಕರ ಮೇಲೂ ಆತ ಗುಂಡಿನ ದಾಳಿ ನಡೆಸಿದ್ದಾರೆ. ಮೃತ ಎಎಸ್ಐ ಅವರನ್ನು ಟೀಕಾ ಶರ್ಮಾ ಎಂಬುದಾಗಿ ಗುರುತಿಸಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.


ಜೈಪುರ ಎಕ್ಸ್ಪ್ರೆಸ್ ರೈಲಿನ ಬಿ 5 ಬೋಗಿಯಲ್ಲಿ ಪೇದೆಯು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. “ರೈಲ್ವೆ ರಕ್ಷಣಾ ಪಡೆ ಪೇದೆಯು ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಎಎಸ್ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಆರ್ಪಿಎಫ್ ತಿಳಿಸಿದೆ.
ಚೇತನ್ ಸಿಂಗ್ ಅವರನ್ನು ಎಸ್ಕಾರ್ಟ್ಗಾಗಿ ನಿಯೋಜಿಸಲಾಗಿತ್ತು. ಅವರೇಕೆ ತಮ್ಮ ಸರ್ವಿಸ್ ಗನ್ ತೆಗೆದು ಗುಂಡಿನ ದಾಳಿ ನಡೆಸಿದರು ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಗುಂಡಿನ ದಾಳಿ ಮಾಡುತ್ತಲೇ ಆತ ರೈಲಿನಿಂದ ಹೊರಗೆ ಜಿಗಿದಿದ್ದಾರೆ. ಬಳಿಕ ಆರ್ಪಿಎಫ್ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
A Railway Protection Force (RPF) jawan shot dead four people on board a train from Jaipur to Mumbai. The victims included three passengers and a RPF Assistant Sub-Inspector (ASI). Railway Protection Force Constable Chetan shot all four victims. The incident happened around 5 am on Monday between Vapi to Borivali to Mira Road station. The accused constable has been detained by Mumbai Railway Police.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm