ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am