ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am