ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm