ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm