ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm