ಬ್ರೇಕಿಂಗ್ ನ್ಯೂಸ್
01-08-23 04:12 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 1: ರಾಜಧಾನಿಯಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸಲಾಗಿತ್ತು. ಸಂತ್ರಸ್ತೆ ದೂರು ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಆ್ಯಂಡಿ ಜಾರ್ಜ್, ಸಂತೋಷ್, ಶಶಿ ಬಂಧಿತ ಆರೋಪಿಗಳು. ಎ1 ಆರೋಪಿ ಆ್ಯಂಡಿ ಜಾರ್ಜ್ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿ ಕೆಲಸ ಮಾಡಿಕೊಂಡಿದ್ದನು. ಬಂಧಿತರಿಂದ ಮೊಬೈಲ್, ಪೆನ್ ಡ್ರೈವ್ ಹಾಗೂ ಲ್ಯಾಪ್ಟ್ಯಾಪ್ ವಶಕ್ಕೆ ಪಡೆಯಲಾಗಿದೆ.
ಎರಡು ವರ್ಷಗಳ ಹಿಂದೆ ಎ1 ಆರೋಪಿ ಆ್ಯಂಡಿ ಜಾರ್ಜ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿದ್ಯಾರ್ಥಿನಿಯ ಪರಿಚಯ ಆಗಿತ್ತು. ನಂತರ ಪ್ರೀತಿಸುವುದಾಗಿ ಹೇಳಿ ಹಲವು ಕಡೆಗಳಲ್ಲಿ ಸಂತ್ರಸ್ತೆ ಜೊತೆ ಸುತ್ತಾಡಿದ್ದಾನೆ. ಈ ವೇಳೆ ಕೆಲವು ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಸೆರೆ ಹಿಡಿದುಕೊಂಡಿದ್ದನು.

ವಿಡಿಯೋ, ಫೋಟೋ ತೋರಿಸಿ ಬ್ಲ್ಯಾಕ್ಮೇಲ್ ;
ನಂತರ ಅದೇ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ತನ್ನ ಇಬ್ಬರು ಸ್ನೇಹಿತರ ಜೊತೆಗೂಡಿ ನಿರಂತರವಾಗಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮೂವರ ಚಿತ್ರಹಿಂಸೆ ತಾಳಲಾರದೇ ಕೊನೆಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
![]()
ಹಲವರಿಗೆ ವಂಚನೆ ಮಾಡಿರುವ ಆರೋಪಿಗಳು ;
ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಕೊಡಿಗೇಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರ ಮೊಬೈಲ್ ಹಾಗೂ ಲ್ಯಾಪ್ಟಾಪ್ನಲ್ಲಿ ಹಲವು ಫೋಟೋ ಮತ್ತು ವಿಡಿಯೋಗಳು ಲಭ್ಯವಾಗಿವೆ. ಇದೇ ರೀತಿ ಹಲವರಿಗೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೊಂದ ಮಹಿಳೆ ಮತ್ತು ಆರೋಪಿ ಆ್ಯಂಡಿ ಜಾರ್ಜ್ ಇಬ್ಬರಿಗೂ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿತ್ತು. ಎ1 ಆರೋಪಿ ಖಾಸಗಿ ಕಾಲೇಜಿನಲ್ಲಿ ಡ್ಯಾನ್ಸ್ ಟೀಚರ್ ಆಗಿದ್ದಾನೆ. ಕಾಲೇಜಿನಲ್ಲಿ ಇದೇ ರೀತಿ ವಿದ್ಯಾರ್ಥಿನಿಯರಿಗೆ ಮೋಸ ಮಾಡಿದ್ದನಾ ಎಂಬುದರ ಬಗ್ಗೆಯೂ ತನಿಖೆ ನಡೆಲಾಗುತ್ತಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.
The Bengaluru police Monday arrested a 28- year-old dance teacher for allegedly blackmailing his 23-year-old ex-girlfriend and raping her several times over the last six months along with two of his friends. The arrested have been identified as Andy George, the dance teacher, Santosh, 28, and Shashi Kumar, 30.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm