ಬ್ರೇಕಿಂಗ್ ನ್ಯೂಸ್
02-08-23 02:48 pm HK News Desk ಕ್ರೈಂ
ಮುಂಬೈ, ಆಗಸ್ಟ್ 2: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ವ್ಯಾಪಾರಿಗಳ ಮನೆಯಲ್ಲಿ ದರೋಡೆ ಮಾಡುವ, ಅಕ್ಷಯ್ ಕುಮಾರ್, ಅನುಪಮ್ ಖೇರ್ ಸೇರಿ ಹಲವರು ನಟಿಸಿರುವ "ಸ್ಪೆಷಲ್ 26" ಸಿನಿಮಾ ಶೈಲಿಯಲ್ಲಿಯೇ ಮುಂಬೈನಲ್ಲಿ 36 ಲಕ್ಷ ರೂ. ದರೋಡೆ ಮಾಡಲಾಗಿದೆ.
ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ (ACB) ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿ ನಗದು, ಚಿನ್ನ ಸೇರಿ 36 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ.

ನವಿ ಮುಂಬೈನಲ್ಲಿರುವ ಕಾಂತಿಲಾಲ್ ಯಾದವ್ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ತೆರಳಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಎಂದು ಮನೆಯವರನ್ನು ಹೆದರಿಸಿದ್ದಾರೆ. ನಿಮ್ಮ ವಿರುದ್ಧ ಕೇಸ್ ದಾಖಲಾಗಿದೆ, ಹಾಗಾಗಿ ದಾಳಿ ಮಾಡಿದ್ದೇವೆ ಎಂದು ತಂಡದಲ್ಲಿದ್ದ ಒಬ್ಬನು ಹೆದರಿಸಿದ್ದಾನೆ. ದಾಳಿ ಹೆಸರಿನಲ್ಲಿ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ.
ಕಾಂತಿಲಾಲ್ ಯಾದವ್ ಹಾಗೂ ಅವರ ಪತ್ನಿಯ ಮೊಬೈಲ್ಗಳನ್ನು ಪಡೆದು, ಅವುಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಇದೇ ವೇಳೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾಂತಿಲಾಲ್ ಅವರು ಗುರುತಿನ ಚೀಟಿ ತೊರಿಸುವಂತೆ ದರೋಡೆಕೋರರಿಗೆ ತಿಳಿಸಿದ್ದಾರೆ. ಆದರೆ, ದಾಳಿ ಬಳಿಕ ತೋರಿಸುವುದಾಗಿ ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
In a Bollywood-style heist, a gang of six thieves, disguised as police officers, forcefully entered the residence of a retired government official in Airoli, Navi Mumbai, last week and walked off with an approximately Rs 36 lakh worth of valuables, a ToI report stated.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm