ಬ್ರೇಕಿಂಗ್ ನ್ಯೂಸ್
02-08-23 08:35 pm HK News Desk ಕ್ರೈಂ
ಕೊಚ್ಚಿ, ಆಗಸ್ಟ್ 1: ಕೇರಳದ ಕೊಲ್ಲಂನಲ್ಲಿ 44 ವರ್ಷದ ಅಮೆರಿಕನ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬೀಚ್ನಲ್ಲಿ ಒಬ್ಬಂಟಿಯಾಗಿ ಕುಳಿತಿದ್ದ ಮಹಿಳೆಗೆ ಮದ್ಯ ಕುಡಿಸಿ ಪ್ರಜ್ಞೆ ತಪ್ಪಿಸಿ ನಂತರ, ಇಬ್ಬರು ಆರೋಪಿಗಳು ಆಕೆಯನ್ನ ತಮ್ಮೊಂದಿಗೆ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ಭಾರತಕ್ಕೆ ಪ್ರವಾಸ ಬಂದಿದ್ದು, ಕೊಲ್ಲಂನ ಆಶ್ರಮದಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ.
ಕ್ಯಾಲಿಫೋರ್ನಿಯಾದಿಂದ ಬಂದಿದ್ದ ಮಹಿಳೆ ;
44 ವರ್ಷದ ಅಮೆರಿಕ ಮಹಿಳೆ ಕೇರಳದ ಕೊಲ್ಲಂನಲ್ಲಿರುವ ಮಾತಾ ಅಮೃತಾನಂದ ಮಾಯಿ ಆಶ್ರಮಕ್ಕೆ ಬಂದಿದ್ದರು. ಅಮೆರಿಕದ ಕ್ಯಾಲಿಫೋರ್ನಿಯಾದ ಮಹಿಳೆ ಜುಲೈ 22 ರಂದು ಭಾರತಕ್ಕೆ ಬಂದಿದ್ದರು. ಅವರು ಆಗಸ್ಟ್ 5 ರಂದು ಯುಎಸ್ಗೆ ಮರಳುವವರಿದ್ದರು.
ಕೊಲ್ಲಂ ಪೊಲೀಸರ ಪ್ರಕಾರ, ಜುಲೈ 31ರಂದು ಬೆಳಿಗ್ಗೆ 10:30ರ ಸಂದರ್ಭದಲ್ಲಿ ಮಹಿಳೆ ಕೊಲ್ಲಂನ ಮಾತಾ ಅಮೃತಾನಂದ ಮಾಯಿ ಆಶ್ರಮದ ಬಳಿಯ ಸಮುದ್ರತೀರದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದರು. ಇಬ್ಬರು ಪುರುಷರು ಅವಳ ಬಳಿಗೆ ಬಂದರು, ಅವಳೊಂದಿಗೆ ಸ್ವಲ್ಪ ಸಮಯ ಮಾತನಾಡಿ, ಒಳ್ಳೆಯವರಂತೆ ನಟಿಸಿದ್ದಾರೆ. ಈ ವೇಳೆ ಆಕೆಗೆ ಸಿಗರೇಟ್ ಆಫರ್ ಮಾಡಿದ್ದಾರೆ. ಆಕೆ ನಿರಾಕರಿಸಿದಾಗ ಮದ್ಯವನ್ನು ಕೊಡಿಸುವುದಾಗಿ ಹೇಳಿದ್ದಾರೆ. ರಮ್ ಕುಡಿಸಿ ಅಮಲೇರಿದ ಮೇಲೆ ಆಕೆಯನ್ನ ಸಮೀಪದ ಖಾಲಿ ಮೆನಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಇಬ್ಬರು ಸ್ಥಳೀಯರ ಬಂಧನ ;
ಪೊಲೀಸರ ಪ್ರಕಾರ, ರಮ್ನಲ್ಲಿ ಕೆಲವು ಅಮಲು ಪದಾರ್ಥಗಳನ್ನು ಬೆರೆಸಲಾಗಿದೆ, ಇದರಿಂದಾಗಿ ಮಹಿಳೆ ಪ್ರಜ್ಞಾಹೀನಳಾಗಿದ್ದಾಳೆ. ಇದಾದ ಬಳಿಕ ಆರೋಪಿಗಳು ಸಂತ್ರಸ್ತೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ. ಪ್ರಜ್ಞೆ ಮರಳಿದ ನಂತರ, ಮಹಿಳೆ ಆಗಸ್ಟ್ 1ರಂದು ರಾತ್ರಿ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್ ತನಿಖೆಯಲ್ಲಿ ಆರೋಪಿಗಳನ್ನು ಸ್ಥಳೀಯರು ಮತ್ತು ಅಪರಾಧ ಹಿನ್ನೆಲೆಯುಳ್ಳ ಜಯನ್ ಮತ್ತು ನಿಖಿಲ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ಈ ಸಂಬಂಧ ಕರುನಾಗಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An American woman, who had arrived in India recently and was staying at an ashram near here, was allegedly gangraped by two men. The accused men were caught on Tuesday and an FIR under various sections, including 376D (gangrape) and 376(2)(n) (repeatedly raping same woman), of the IPC, has been registered against them, police said.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm