ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm