ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm