ಬ್ರೇಕಿಂಗ್ ನ್ಯೂಸ್
03-08-23 11:01 am Mangalore Correspondent ಕ್ರೈಂ
ಉಳ್ಳಾಲ, ಆಗಸ್ಟ್ 3: “ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ (ಸಿಂಥೆಟಿಕ್ ಡ್ರಗ್ಸ್)ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಬಂಧಿಸಲಾಗಿದೆ.
ಬಂಧಿತ ಮೂವರು ಸಜೀಪ ಮುನ್ನೂರು ಗ್ರಾಮದವರಾಗಿದ್ದು, ನಂದಾವರ ಬಸ್ತಿಗುಡ್ಡೆ ಹೌಸ್ ನಿವಾಸಿ, ಪ್ರಸ್ತುತ ಉಳ್ಳಾಲ ಹಳೆಕೋಟೆಯಲ್ಲಿ ವಾಸವಾಗಿದ್ದ ಮೊಹಮ್ಮದ್ ಹಫೀಝ್ ಯಾನೆ ಅಪ್ಪಿ(35), ನಂದಾವರ ನಿವಾಸಿ ಅಮೀರ್ ಯಾನೆ ಅಮ್ಮಿ(34), ದಾಸರಗುಡ್ಡೆ ಪ್ರಸ್ತುತ ಹಳೆಯಂಗಡಿ ಸಂತೆ ಕಟ್ಟೆ ಮಸೀದಿ ಬಳಿ ನಿವಾಸಿ ಜಾಕೀರ್ ಹುಸೇನ್ ಯಾನೆ ತಾಚಿ(28) ಆರೋಪಿಗಳು.

ಆರೋಪಿಗಳಿಂದ ಒಟ್ಟು 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್ಗಳು, , ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 15,70,500 ರೂ. ಅಂದಾಜಿಸಲಾಗಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಾರಾಟ ಮಾಡಲು ಸಾಗಿಸುತ್ತಿರುವ ಖಚಿತ ಮಾಹಿತಿಯಂತೆ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ಸುಂದರ್ ಎಚ್.ಎಂ., ಪಿಎಸ್ಐಯವರಾದ ರಾಜೇಂದ್ರ ಬಿ., ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿಗಳ ತಂಡ ದಾಳಿ ನಡೆಸಿದೆ.
In an effort to make the city drug-free, the CCB police successfully arrested three drug peddlers in possession of MDMA (Methylenedioxymethamphetamine) drug.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm