ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.
ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am