ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm