ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm