ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm