ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.



ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am