ಬ್ರೇಕಿಂಗ್ ನ್ಯೂಸ್
03-08-23 04:00 pm Mangalore Correspondent ಕ್ರೈಂ
ಉಳ್ಳಾಲ, ಆ.3: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನಮೊಗರಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ.
ತೊಕ್ಕೊಟ್ಟು ಒಳಪೇಟೆಯ ಲಕ್ಷ್ಮೀ ಕ್ಯಾಂಟೀನ್, ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದು ಹಣವನ್ನು ದೋಚಲಾಗಿದೆ. ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೇಲ್ಛಾವಣಿಯ ಹಂಚು ಸರಿಸಿ ಒಳ ನುಸುಳಿದ ಚಾಣಾಕ್ಷ ಕಳ್ಳ ಮೊದಲಿಗೆ ಸಿಸಿಟಿವಿ ಇರೋದನ್ನ ಗಮನಿಸಿದ್ದು ವೀಡಿಯೋ ದಾಖಲಾಗುವ ಹಾರ್ಡ್ ಡಿಸ್ಕ್ ಇರುವ ಡಿವಿಆರನ್ನೇ ಮೊದಲಿಗೆ ಕಿತ್ತು ಮೇಜಿನ ಮೇಲಿರಿಸಿದ್ದಾನೆ.
ಬಳಿಕ ಒಳಗಿದ್ದ ಸುಮಾರು ಐದು ಸಾವಿರ ನಗದನ್ನ ಎಗರಿಸಿದ ನಂತರ ಡಿವಿಆರ್ ಅನ್ನು ಮರೆತು ಅಲ್ಲೇ ಬಿಟ್ಟು ಹೋಗಿದ್ದಾನೆ. ಪಕ್ಕದ ಲಕ್ಷ್ಮೀ ಕ್ಯಾಂಟೀನ್ ಗೂ ಕನ್ನ ಹಾಕಿದ್ದು ಸಿಕ್ಕಿದ 500 ರೂಪಾಯಿ ನಗದನ್ನ ಎಗರಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ನಗದು ಸಿಗದೆ ಹೆಡ್ ಫೋನ್ ಗಳನ್ನ ಕಳವು ಮಾಡಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಜಪ್ಪಿನಮೊಗರುವಿನ ಟೈಲ್ಸ್ ಅಂಗಡಿಗೂ ಕನ್ನ ಹಾಕಲಾಗಿದ್ದು ಸುಮಾರು 6000 ನಗದನ್ನ ದೋಚಲಾಗಿದೆ. ಪೊಲೀಸರು ಸಿಸಿಟಿವಿ ಪೂಟೇಜನ್ನ ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಕಳ್ಳ ಹೊರ ರಾಜ್ಯದ ವಲಸಿಗನೆಂದು ತಿಳಿದು ಬಂದಿದ್ದು ಒಬ್ಬನೇ ಸರಣಿ ಕಳ್ಳತನ ನಡಸಿದ್ದಾನೆಯೇ ಅಥವಾ ಗ್ಯಾಂಗ್ ಇದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Thokottu Robbery in various shops, CCTV footages found by Police.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am